Tuesday 12 June 2018

ನನಗೆ ಈಗಲೂ ಮಾನ್ಯ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದ ಸಚಿವ! ಯಾರು ಆ ಮಂತ್ರಿ?

ನನಗೆ ಈಗಲೂ ಮಾನ್ಯ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದ ಸಚಿವ! ಯಾರು ಆ ಮಂತ್ರಿ?

ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಹಿಂದುಳಿದ ವರ್ಗಗಳ ಖಾತೆಯ ಸಚಿವ ಪುಟ್ಟರಂಗ ಶೆಟ್ಟಿ ಹೇಳಿದ್ದಾರೆ. ಇಂದು ವರುಣಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಪುಟ್ಟರಂಗ ಶೆಟ್ಟಿ, ಉಪ್ಪಾರರು ವಿಧಾನಸೌದದ ಮೆಟ್ಟಿಲು ತುಳಿದಿದ್ದಾರೆ ಅಂದರೆ ಅದಕ್ಕೆ ಸಿದ್ದರಾಮಯ್ಯ ಕಾರಣ. ನಾನು ಮಂತ್ರಿಯಾಗಿದ್ದರೆ ಅದು ಸಿದ್ದರಾಮಯ್ಯನವರಿಂದ. ಹೀಗಾಗಿ ನನ್ನ ಪಾಲಿಗೆ ಅವರೇ ಮುಖ್ಯಮಂತ್ರಿಗಳು ಎಂದು ಸಚಿವ ಪುಟ್ಟರಂಗಶೆಟ್ಟಿ ಬಹಿರಂಗವಾಗಿ ಹೇಳಿದರು.



ದೇ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಧರ್ಮಸೇನಾ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗದಿದ್ದರೂ ಮುಖ್ಯಮಂತ್ರಿಗಿಂತಲೂ ಉನ್ನತ ಸ್ಥಾನವಾದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಇದು ನಮಗೆ ಸಾಕು. ಜೊತೆಯಲ್ಲಿದ್ದವರೇ ಮೋಸ ಮಾಡಿದಾಗ ನೋವಾಗುತ್ತೆ. ಆದರೆ ನೀವು ಚಾಮುಂಡೇಶ್ವರಿ ಸೋಲಿನಿಂದ ಎದೆಗುಂದಬೇಡಿ ಎಂದು ಮಾಜಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಅಲ್ಲದೇ ನಾನು ಮೊದಲೇ ಹೇಳಿದ್ದೆ ಚಾಮುಂಡೇಶ್ವರಿ ಕ್ಷೇತ್ರ ಬೇಡ ಎಂದು, ಆದರೆ ನನಗೆ ಭಯವಿಲ್ಲ ನಿನಗೇಕೆ ಭಯ ಎಂದು ನನ್ನನ್ನು ಸುಮ್ಮನಾಗಿಸಿದ್ದರು. ಈಗ ಇಲ್ಲಿನ ಜನರೇ ಕೈ ಬಿಟ್ಟಿದ್ದಾರೆ ಅಂತಾ ಬೇಸರ ವ್ಯಕ್ತಪಡಿಸಿದರು.

No comments:

Post a Comment