ಗದಗ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶಾಲಾಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸಲು ಮಾನ್ಯಶ್ರೀ ಹೆಚ್ .ಕೆ.ಪಾಟೀಲ್ ಸಾಹೇಬರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಾನ್ಯಶ್ರೀ ಸುರೇಶ ಕುಮಾರ್ ಅವರಿಗೆ ಮನವಿಮಾಡಲಾಯಿತು ಹಾಗೂ ಗದಗ್ ಜಿಲ್ಲೆಯ ಎಲ್ಲಾ ಶಾಲೆಗಳಿಗೂ ಭೇಟಿ ನೀಡಿ ಶಾಲೆಯ ಸಮಸ್ಯೆಗಳನ್ನು ಪರಿಹರಿಸಲು ನಿರ್ಧರಿಸಲಾಯಿತು
ಗದಗ ನಗರದ ಖಾನತೋಟದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆ ನಂಬರ -೨ .ಭೇಟಿ ನೀಡಿ ವಿದ್ಯಾರ್ಥಿನಿ ಸಹೋದರಿಯರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆ ಮತ್ತು ಬೇಡಿಕೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿ ,ಬಿಸಿಯೂಟದಲ್ಲಿ ಸಾಕಷ್ಟು ತೊಂದರೆ ಕಂಡುಬಂಧಿದ್ದರಿಂದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಒಂದು ವಾರದಲ್ಲಿ ಸರಿಪಡಸದಿದ್ದಲ್ಲಿ ಸೂಕ್ತಕ್ರಮ ಜರುಗಿಸಲು ಆದೇಶ ಮಾಡಿದ್ದೇನೆ .